ಪತ್ರದ ಜೊತೆ ಒಂದೆರೆಡು ಮುತ್ತುಗಳಿರಲಿ

27 ಏಪ್ರಿಲ್

ಸಂಪಿಗೆ ಮೂಗಿನ ಹಸಿರು ದಾವಣಿಯ ನನ್ನ ಅಂತರಂಗದ ಗೆಳತಿಗೆ ನಿನ್ನ ಪ್ರೇಮದ ಗೆಳೆಯ ಕೊಡುವ ಮತ್ತು ಬೇಡುವ ಸಿಹಿ ಸಿಹಿ ಮುತ್ತುಗಳು. ನಾನು ಕ್ಷೇಮ ನೀನು ಕ್ಷೇಮವೆಂದು ನಿನ್ನ ಪತ್ರದಿಂದ ತಿಳಿಯಿತು, ತಿಳಿಸುವುದೇನೆಂದರೆ, ನಾನು ನಿನ್ನಂತರಂಗದ ಒಲವಿನ ನೆನಪುಗಳಲ್ಲಿ ಸದಾ ಖುಷಿಯಾಗಿದ್ದೆ, ಖುಷಿಯಾಗಿದ್ದೇನೆ ಮತ್ತು ಖುಷಿಯಾಗಿರುತ್ತೇನೆ. ಮತ್ತೆ ನೀನು ಹೇಗಿದ್ದೀಯಾ? mooಗಿನ ತುದಿಯಲ್ಲಿ ಮೊದಲಿನಂತೆ ಕೊಪದ ಜ್ವಾಲಾಮುಖಿ ಆಗಾಗ ಚಿಮ್ಮುತ್ತಿದೆಯೇ? ನಿನ್ನ ಮಲ್ಲಿಗೆ ಜಡೆ ಈಗಲೂ ನಿನ್ನ ಮನೆಯ ಅಂಗಳದ ಅಂಚನ್ನು ಇಷ್ಟಿಷ್ಟೇ ತಾಕುತ್ತಿದೆಯೇ? ನಿನ್ನ ತುಟಿಗಳಲ್ಲಿರುವ ನನ್ನ ನಗು ಸ್ವಲ್ಪವೂ ಮಾಸಿಲ್ಲ ತಾನೆ? ನನ್ನ ಹೆಸರಿನ ನಿನ್ನ ಕೊಟ್ಟಿಗೆಯ ಕರುವನ್ನ ದಿನಕ್ಕೆಷ್ಟು ಬಾರಿ ಮುದ್ದಾಡಿ ಬರುತ್ತೀ ಮುದ್ದುಗಿಣಿ? ನೀನು ರಾತ್ರಿಪುರ ತಬ್ಬಿ ಮಲಗುವ ಬೆಕ್ಕಿನ ಮುದ್ದುಮರಿಗೆ ನನ್ನ ಹೆಸರಿಟ್ಟ ಔಚಿತ್ಯವೇನೆಂದು ಪ್ರಶ್ನಿಸಬಹುದೇ? ಪಿತೃ ಸಮಾನರಾದ ನಿಮ್ಮ ತಂದೆಯವರಿಗೆ ವಾಸುವಿನ ಒಲವನ್ನ ತಿಳಿಸುವ ಘಳಿಗೆಯನ್ನ ಪಕ್ಕದ ಮನೆಯ ಸುಬ್ರಾಯ ಭಟ್ಟರನ್ನ ಕೇಳಿ ಆಯಿತೆ? ಮನೆ ಮುಂದಿನ ಗೋರಂಟೀ ಗಿಡಕ್ಕೆ ನನ್ನ ನಮಸ್ಕಾರವನ್ನ ಹಿಂದಿನ ಪತ್ರದಲ್ಲೆ ತಿಳಿಸಿದ್ದೆ ಅದಕ್ಕೆ ತಲುಪಿಸಿದೆಯಾ? ನನ್ನ ಕೈಗಳಿಂದ ನಿನ್ನ ಮುದ್ದಾದ ಕೈಗೆ ಬಣ್ಣ ತುಂಬಿದ ಮುದ್ದಾದ ಗಿಡ ಅದು. ಅದಕ್ಕೆ ನನ್ನ ನಮಸ್ಕಾರಗಳು ಸಂದಾಯವಾಗಲೇ ಬೇಕು ಅದಕ್ಕಾಗಿ ಮತ್ತೊಮ್ಮೆ ನೆನಪಿಸುತ್ತಿದ್ದೇನೆ.

ನನ್ನ ಟ್ರಂಕ್ ಕಾಲ್ ಗೆ ನೀನು ತೋಟದ ಮನೆಯ ಮಾರಪ್ಪಣ್ಣನ ಮನೆಗೆ ರಾತ್ರಿ ಓಡಿ ಬರುವಾಗ ಜಾರಿ ಬಿದ್ದು ಮಂಡಿ ತರಚಿಸಿಕೊಂಡಿರುವುದು ತಿಳಿಸಿದ್ದೆ ವಿಷಯ ತಿಳಿದು ನನಗೇ ನೋವಾದಷ್ಟು ನೋವಾಯಿತು. ಈಗ ಆ ಪೋನು ಹಾಳಾಗಿದೆ ಎಂದು ತಿಳಿದು ತುಂಬಾ ಕುಷಿಯಾಯಿತು. ಮಂಡಿ ತರಚಿಕೊಂಡಾಗ ತ್ಯಾಂಪಣ್ಣನ ನೋವಿನೆಣ್ಣೆಯನ್ನು ಹಚ್ಚಿ ಬಿಸಿ ನೀರು ಹಾಕುತ್ತಿದ್ದೆ ಹಾಗೆ ಕದ್ದು ಒಂದು ಮುತ್ತು ಕೂಡ(ಮುಖ ತಿರುಗಿಸ ಬಾರದು)

ದೇವಕಿ ನನಗೀಗಲು ರತ್ನಮ್ಮನ ಹೋಟೇಲಿನ ಪಡ್ಡು ತಿನ್ನುವ ಆಸೆಯಾಗುತ್ತಿದೆ ಖಾರದ್ದು ಮತ್ತು ಸಿಹಿಯದ್ದು, ಸಿಹಿನೇ ಇಷ್ಟ ನೀನು ಕಚ್ಚಿ ಕೊಡ್ತಿದ್ಯಲ್ಲ ಅದು ಇನ್ನು ಇಷ್ಟ…… ಏನು ಮಾಡಲಿ? ಸೊಂಪಾಗಿ ಬೆಳೆದ ಜಾರಿಗೆ ಮರದಲ್ಲಿ ಇಬ್ಬರು ಹತ್ತಿ ಕುಳಿತು ಅರ್ಧ ದಿನ ಕಳೆದದ್ದು ಈಗಲು ನಗು ತರಿಸುತ್ತಿದೆ, ನೀನು ಬರೆಯುವ ಮುಂದಿನ ಪತ್ರದಲ್ಲಿ ಉತ್ತರದ ಸಮೇತ ನಿನ್ನ ಮಲ್ಲಿಗೆಯ ನಗುವನ್ನ ರವಾನೆ ಮಾಡತಕ್ಕದ್ದು, ನೀನು ಇಷ್ಯೀ ಥೂ ಕೊಳಕಾ…ಅಂದರೂ ಚಿಂತೆಯಿಲ್ಲ ಪತ್ರದ ಜೊತೆ ಒಂದೆರೆಡು ಮುತ್ತುಗಳಿರಲಿ, ಎರಡು ಬೇಕು, ಮೂರು ಸಾಕು ಅನ್ನುವ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಹಾಗೂ ನಮಗೆ ಗಂಡು ಮಗುವಾದರೇ ಭೀಮಸೇನ ಅಂತಲೂ ಹೆಣ್ಣುಮಗುವಾದರೇ ಹೇಮಾವತಿ ಅಂತಲೂ ಹೆಸರಿಡುವ ನಿನ್ನ ಜೊತೆಗಿನ ನನ್ನ ಜನ್ಮ ಸಿದ್ಧ ಹೋರಾಟದಂತಹ ಮಾತಿನಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ. ಹಾಗು ನಿಮ್ಮ ತಂದೆಯವರು ನಮ್ಮ ಮದುವೆಗೆ ಒಪ್ಪಿಗೆ ಸೂಚಿಸಲಿ ಎಂದು ಹನುಮಂತ ದೇವರ ಗುಡಿಗೆ ಹೋಗಿ ಪೂಜೆ ಮಾಡಿಸಿಕೊಂಡು ಬರತಕ್ಕದ್ದು, ಪೂಜೆ ಮಾಡಿಸಿಕೊಂಡು ಬಂದ ಕುಂಕುಮ, ವಿಬೂತಿ, ಮತ್ತು ಸ್ವಲ್ಪ ಅಕ್ಕಿಕಾಳುಗಳನ್ನ ಪತ್ರದ ಜೊತೆ ಕಳುಹಿಸತಕ್ಕದ್ದು. ಮತ್ತು ಪತ್ರದ ಮೊದಲಿಗೆ ಪ್ರೀತಿಯ ಪತಿದೇವರಿಗೆ ಪ್ರೀತಿಯ ಸವಿಮುತ್ತುಗಳು ಎಂಬ ಒಕ್ಕಣೆಯನ್ನ ಕಡ್ಡಾಯವಾಗಿ ನಮೂದಿಸತಕ್ಕದ್ದು.

ಆದಷ್ಟು ಬೇಗ ನಿನ್ನನ್ನು ಬಂದು ಸೇರಿಕೊಳ್ಳುತ್ತೇನೆ. ಗೋರಂಟೀ ಗಿಡದ ಹಳೆಯ ಬಾಕಿಗಳನ್ನೆಲ್ಲ ತೀರಿಸಿಬಿಡುತ್ತೇನೆ ಕೊಳಕ ಇಷ್ಯೀ.. ಅನ್ನುತ್ತ ನೀನು ಮಾರುದ್ದ ದೂರ ಹೋಗಿ ಮಲ್ಲಿಗೆ ಗಿಡದ ಬಳಿ ನಿಲ್ಲುವುದನ್ನು ಇಲ್ಲಿಯೇ ಕುಳಿತು ಕಲ್ಪಿಸಿಕೊಂಡು ಮತ್ತಷ್ಟು ನಿನ್ನನ್ನ ಕಾಡಬೇಕೆಂದು ಮನಸ್ಸಿನಲ್ಲೆ ಅಂದುಕೊಳ್ಳುತ್ತಿದ್ದೇನೆ. ಕೇವಲ ನಿನ್ನ ಪಡೆಯೋದಕ್ಕೋಸ್ಕರ ಈ ಡಾಲರುಗಳ ಊರಿನಲ್ಲಿ ಬಂದು ಕೆಲವೊಮ್ಮೆ ನಿನ್ನ ನೆನಪಾಗಿ ಬಿಕ್ಕಳಿಸುತ್ತೇನೆ..ಆದಷ್ಟು ಬೇಗ ನಿನ್ನನ್ನ ಸೇರುತ್ತೇನೆಂಬ ವಿಶ್ವಾಸ ಎಲ್ಲಾ ವಿರಹಗಳನ್ನೆಲ್ಲ ದೂರ ಮಾಡುತ್ತಿದೆ. ಬರಿಯೊದಕ್ಕೆ ತುಂಬಾ ಇದೆ ಈಗಾಗಲೆ ಮನಸ್ಸು ನಿನ್ನ ಪತ್ರದ ನಿರಿಕ್ಷೆಯ ಬೆನ್ನು ಹತ್ತಿ ಕುಳಿತಿದೆ. ಸದ್ಯಕ್ಕೆ ಪತ್ರ ಮುಗಿಸುತ್ತಿದ್ದೇನೆ.. ಆದಷ್ಟು ಬೇಗನೇ ಪತ್ರ ಬರೆಯತಕ್ಕದ್ದು. ಬೇರೇನು ವಿಶೇಷವಿಲ್ಲ ಇದ್ದರೆ ನಿನ್ನ ಪತ್ರ ನೋಡಿ ಬರೆಯುತ್ತೆನೆ..:)

5 Responses to “ಪತ್ರದ ಜೊತೆ ಒಂದೆರೆಡು ಮುತ್ತುಗಳಿರಲಿ”

  1. ಅನಾಮಿಕ ಏಪ್ರಿಲ್ 28, 2012 at 5:19 ಫೂರ್ವಾಹ್ನ #

    super sir

  2. ಅನಾಮಿಕ ಮೇ 8, 2012 at 11:36 ಫೂರ್ವಾಹ್ನ #

    Nice letter. Wish all the men are as eloquent as you are about their feelings 🙂

  3. srikanth ಸೆಪ್ಟೆಂಬರ್ 8, 2012 at 2:54 ಅಪರಾಹ್ನ #

    sir i am also love fail boy

  4. mahantesh ಸೆಪ್ಟೆಂಬರ್ 13, 2012 at 12:56 ಅಪರಾಹ್ನ #

    muttu tumba shihiyagide.

  5. amaresh.pg ಸೆಪ್ಟೆಂಬರ್ 26, 2012 at 6:25 ಫೂರ್ವಾಹ್ನ #

    ((((((((((NOVEENA SANGATI NENEDU ALADIRI
    NENEYUTALE YIDDARE SAGADU BADUKA SAVARI)))))))))

    <<<<<<>>>>>>>>

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

%d bloggers like this: